Connect with us

ಕರ್ನಾಟಕ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್​ವೇ: ಆಗಸ್ಟ್ 1 ರಿಂದ ಬೈಕ್​​, ಆಟೋ ಸಂಚಾರ ನಿರ್ಬಂಧ

Published

on

ಬೆಂಗಳೂರು: ಆಗಸ್ಟ್‌ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್‌, ಆಟೊ ಮತ್ತು ಟ್ರ್ಯಾಕ್ಟರ್‌ ಸಂಚಾರ ನಿಷೇಧಿಸಲಾಗಿದೆ. ಈ ಕುರಿತು ಟೋಲ್‌ ಸಂಗ್ರಹ ಪ್ಲಾಜಾಗಳ ಮುಂದೆ ಪ್ರಚಾರ ಫಲಕಗಳನ್ನು ಈಗಾಗಲೇ ಅಳವಡಿಸಲಾಗಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಪ್ರಯಾಣದ ಸುರಕ್ಷತೆ ಮತ್ತು ಸುಧಾರಣೆಗೆ ಕೆಲವು ದಿಟ್ಟ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್‌ ಅವರು ಎರಡು ಬಾರಿ ವೀಕ್ಷಣೆ ಮಾಡಿದ್ದರು. ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಕೂಡ ತಜ್ಞರ ತಂಡದಿಂದ ಪರಿಶೀಲನೆ ನಡೆಸಿತ್ತು.

ಯಾವ ಯಾವ ವಾಹನ ನಿಷೇಧ

ಮಲ್ಟಿ ಆಕ್ಸಿಸ್‌ ಕಂಟ್ರೋಲ್‌ ಇರುವಂತಹ ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ (ಆಟೋ ರಿಕ್ಷಾ ಸೇರಿ) ಹಾಗೂ ಟ್ರ್ಯಾಕ್ಟರ್‌ಗಳು, ಮಲ್ಟಿ ಆಕ್ಸೆಲ್‌ ಹೈಡ್ರಾಲಿಕ್‌ ವಾಹನಗಳ ಸಂಚಾರವನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ.

ಜುಲೈ 12ರಂದು ಗೆಜೆಟ್‌ ನೋಡಿಫಿಕೇಷನ್‌

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ಬೈಕ್‌, ಆಟೋರಿಕ್ಷಾ ಮತ್ತು ಟ್ರಾಕ್ಟರ್‌ಗಳ ಸಂಚಾರವನ್ನು ನಿಷೇಧಿಸುವ ಸಂಬಂಧ ಜುಲೈ 12 ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹೆಜ್ಜಾಲ ಸಮೀಪದ ಕಣಿಮಿಣಿಕೆ ಟೋಲ್‌ ಫ್ಲಾಜಾ ಮುಂಭಾಗದಲ್ಲಿ ಮುನ್ಸೂಚನೆ ಕ್ರಮವಾಗಿ ಪ್ರಚಾರದ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಇನ್ನು ಮುಂದೆ ನಾಲ್ಕು ಚಕ್ರಗಳ ಮೇಲ್ಪಟ್ಟ ವಾಹನಗಳನ್ನು ಹೊರತುಪಡಿಸಿ ಬೈಕ್‌, ಆಟೋರಿಕ್ಷಾ ಮತ್ತು ಟ್ರ್ಯಾಕ್ಟರ್‌ ವಾಹನಗಳು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಚಲಿಸುವಂತಿಲ್ಲ.

ಅಪಘಾತ ತಡೆಗೆ ಈ ಕ್ರಮ

ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಆದಾಗಿನಿಂದಲೂ ಸಣ್ಣ ಮತ್ತು ನಿಧಾನವಾಗಿ ಚಲಿಸುವ ಲಘು ವಾಹನಗಳಿಗೆ ಹೆದ್ದಾರಿಯಲ್ಲಿ ಸಂಚಾರ ನಿಷೇಧಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಅಲ್ಲದೆ, ಹೆದ್ದಾರಿಯಲ್ಲಿ ಬೈಕ್‌ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಹೀಗಾಗಿ, ಎಡಿಜಿಪಿ ಅಲೋಕ್‌ಕುಮಾರ್‌ ಅವರು ಅಪಘಾತ ತಡೆಗೆ ಕೆಲವು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವಂತೆ ಪೊಲೀಸರಿಗೂ ನಿರ್ದೇಶನ ನೀಡಿದ್ದರು.

ಆಗಸ್ಟ್‌ 1 ರಿಂದ ಬೈಕ್‌, ಆಟೋರಿಕ್ಷಾ ಮತ್ತು ಟ್ರ್ಯಾಕ್ಟರ್‌ ವಾಹನಗಳ ಸಂಚಾರವನ್ನು ನಿಷೇಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ವಾಹನಗಳು ಇನ್ನು ಮುಂದೆ ಸವೀರ್‍ಸ್‌ ರಸ್ತೆಯಲ್ಲಿಯೇ ಸಂಚರಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಎಕ್ಸ್‌ಪ್ರೆಸ್‌ ವೇನಲ್ಲಿಸಂಚರಿಸುವ ವಾಹನಗಳಿಗೆ ಪೊಲೀಸರು ದೊಡ್ಡ ಮೊತ್ತದ ದಂಡ ವಿಧಿಸಲಿದ್ದಾರೆ ಎಂದು ಹೇಳಲಾಗಿದೆ.

Home
Videos
Shop
error: Content is protected !!