ಬೆಂಗಳೂರು
ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡುತ್ತಿರುವ ರಾಜ್ಯಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜುಲೈ ತಿಂಗಳ ಒಂಬತ್ತನೇ ತಾರೀಖಿನಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ. ಪ್ರಸ್ತುತ ಕಾರ್ಯಕ್ರಮದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಕವಿಗಳು 7349197313 ವಾಟ್ಸಪ್ ನಂಬರಿಗೆ ಸಂರ್ಪಕಿಸಿ ನೋಂದಾವಣೆ ಮಾಡಬಹುದು ಎಂದು ಕಾರ್ಯಕ್ರಮದ ಆಯೋಜಕ ಹಾಗೂ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





