Connect with us

ಕರ್ನಾಟಕ

ನರೇಂದ್ರ ಮೋದಿ ಪ್ರವಾಸ ಮಾಡಿದ ಕಡೆಯೆಲ್ಲಾ ಕಾಂಗ್ರೆಸ್ ಗೆದ್ದಿದೆ : ಸಿದ್ದರಾಮಯ್ಯ

Published

on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮಾಡಿದ ಕಡೆಯೆಲ್ಲಾ ಕಾಂಗ್ರೆಸ್ ಗೆದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿ, ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕೆ 28 ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ‌. ಯಾವ ಪ್ರಧಾನಿ ಕೂಡಾ ರಾಜ್ಯದ ಚುನಾವಣೆಗೆ ಇಷ್ಟು ಬಾರಿ ಬಂದ ನಿದರ್ಶನ ಇಲ್ಲ ಎಂದರು.

ಆದರೆ ಮೋದಿ ಪ್ರವಾಸ ಮಾಡಿದ ಕಡೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು. ಈ ಹಿನ್ನಲೆಯಲ್ಲಿ ನರೇಂದ್ರ ಮೋದಿ ಅವರನ್ನು ಜಾಸ್ತಿ ಡಿಪೆಂಡ್ ಆಗಬೇಡಿ ಎಂದು ಬಿಜೆಪಿಗೆ ಸಲಹೆ ನೀಡಿದರು.

ನರೇಂದ್ರ ಮೋದಿ ಪಾಪ್ಯುಲಾರಿಟಿ ಇದೆ. ಅದರಲ್ಲಿ ಡೌಟ್ ಇಲ್ಲ. ಆದರೆ ಅದು ಇವಾಗ ಮಂಕಾಗಿದೆ. ಕರ್ನಾಟಕದಿಂದ ಶುರುವಾಗಿದೆ ನಿಮ್ಮ ಅವನತಿ ಎಂದು ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

ನರೇಂದ್ರ ಮೋದಿ ಹೊಗಳುವುದು ಬಿಟ್ಟರೆ ಬಿಜೆಪಿಗೆ ಏನಿದೆ? ಎಂದು ತರಾಟೆಗೆ ತೆಗೆದುಕೊಂಡ ಅವರು,‌ ಕಾಂಗ್ರೆಸ್ ನಲ್ಲಿ ಎರಡು ಬಾರಿ ಸಿಎಂ ಆಗಲು ಅವಕಾಶ ಸಿಕ್ತು, ಅದಕ್ಕೆ ಪಕ್ಷಕ್ಕೆ ಋಣಿ ಆಗಿದ್ದೇನೆ ಎಂದರು.

ಕೋಮುವಾದದ, ಭ್ರಷ್ಟಾಚಾರ, ಬೆಲೆ ಏರಿಕೆ ವಿರುದ್ಧ ಮತ ಕೊಟ್ಟಿದ್ದಾರೆ. ನಾವು ಐದು ವರ್ಷಗಳಲ್ಲಿ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ನಮ್ಮ ಉದ್ದೇಶ. ಕರ್ನಾಟಕವನ್ನು ಸರ್ವ ಜನಾಂಗಗಳ ಶಾಂತಿಯ ತೋಟ ಮಾಡಬೇಕು. ಅದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು‌.

ಮೋದಿಯನ್ನು ಕರೆದುಕೊಂಡು ಬಂದು ರೋಡ್ ಶೋ ಮಾಡಿದ್ರು. ಮೋದಿ ಆಶೀರ್ವಾದ ಬೇಕು ಎಂದಾದರೆ ಬಿಜೆಪಿಗೆ ವೋಟ್ ಮಾಡಿ ಎಂದು ಜೆಪಿ ನಡ್ಡಾ ಹೇಳಿದ್ದರು‌. ಇಲ್ಲದಿದ್ದರೆ ಕೆಲಸ ನಿಲ್ಲಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಸಿಎಂ ದಾರಿ ತಪ್ಪಲ್ಲ ಆದರೆ ಬೇರೆಯವರ ದಾರಿ ತಪ್ಪಿಸುತ್ತಾರೆ ಎಂದು ತಿರುಗೇಟು ನೀಡಿದರು.

Home
Videos
Shop
error: Content is protected !!