Connect with us

ಕರ್ನಾಟಕ

ಯಾರದ್ದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ; ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ- ನಂಜಾವಧೂತ ಶ್ರೀ

Published

on

ಮಂಡ್ಯ: ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಯಾವುದೋ ಸಮುದಾಯಕ್ಕಿದ್ದ ಮೀಸಲಾತಿಯನ್ನು ಕಿತ್ತು ಒಕ್ಕಲಿಗರು ಲಿಂಗಾಯತರಿಗೆ ರಾಜ್ಯ ಸರ್ಕಾರ ಕೊಟ್ಟಂತಾಗಿದೆ. ಆದರೆ, ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ ಎಂದು ಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

ಈ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿಗಳು, ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ ಎಂದು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದರು.

ಶೇ.16ಕ್ಕೆ ಹೆಚ್ಚಳ ಮಾಡುವ ಬೇಡಿಕೆ ಇಟ್ಟಿದ್ದೆವು

ಸದ್ಯ ಕರ್ನಾಟಕದ ಜನಸಂಖ್ಯೆಯಲ್ಲಿ ಒಕ್ಕಲಿಗರು ಶೇ.16 ರಷ್ಟು ಇದ್ದಾರೆ. ಹೀಗಾಗಿಯೇ, ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಸಮುದಾಯದ ಕಡೆಯಿಂದ ಬೇಡಿಕೆ ಇಟ್ಟಿದ್ದೆವು. ಆದರೆ, ಯಾರದ್ದೋ ಮೀಸಲಾತಿಯನ್ನು ಕಿತ್ತು ಒಕ್ಕಲಿಗೆ ಸಮುದಾಯಕ್ಕೆ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ದುಡಿದು ಹಂಚಿ ಉಳಿದ್ರೆ ತಿನ್ನುತ್ತೇವೆ

ಒಕ್ಕಲಿಗ ಸಮುದಾಯದವರು ನಾಡಿನ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದರೆ, ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ. ಅಂತಹವರಿಗೆ ರಾಜ್ಯ ಸರ್ಕಾರ ಇನ್ನೊಬ್ಬರ ಮೀಸಲಾತಿ ಕಿತ್ತು ಕೊಟ್ಟಿದೆ ಎಂದು ಕಿಡಿಕಾರಿದರು.

ಪಕ್ಷಗಳ ಪ್ರಣಾಳಿಕೆ ಬಗ್ಗೆ ಬೇಸರ

ಪ್ರಸ್ತುತ ಚುನಾವಣೆಗೆ ರಾಜಕೀಯ ಪಕ್ಷಗಳು ನೀಡಿರುವ ಪ್ರಣಾಳಿಕೆ ಬಗ್ಗೆ ನಂಜಾವಧೂತ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಅತ್ಯಂತ ಕೆಳಮಟ್ಟದ ಪ್ರಚಾರ ಗಳಿಸುವ ಕಾರ್ಯಕ್ರಮಗಳನ್ನು ಕೊಡುತ್ತೀದ್ದಾರೆ. (ಚೀಪ್ ಪಾಪ್ಯುಲಾರಿಟಿ ಪ್ರೋಗ್ರಾಂಗಳು) ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹ ರಾಜ್ಯ ನಮ್ಮದು ಆಗಬಾರದು ಎಂದರು.

ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ

ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ರಾಜಕೀಯ ಪಕ್ಷಗಳಿಗೆ ಕಿವಿ ಮಾತು ಹೇಳಿದರು.

Home
Videos
Shop
error: Content is protected !!